JANATAA24 NEWS DESK
CN Halli: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಹೊನ್ನಮರಡಿ ಜಾತ್ರೆಗೆ ಆಗಮಿಸಿ ಶ್ರೀ ರಂಗನಾಥ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ, ವಿವಿಧ ಗ್ರಾಮಗಳ ಗ್ರಾಮಸ್ಥರು ಹಾಗೂ ಭಕ್ತರ ಸಹಕಾರದಿಂದ ಅನ್ನದಾನ ನೆರವೇರಿತು.

ಚಿಕ್ಕನಾಯಕನಹಳ್ಳಿ: ತಾಲೂಕಿನ ಬೆಳಗುಲಿ ಹೊನ್ನಮರಡಿ ಶ್ರೀ ರಂಗನಾಥ ಸ್ವಾಮಿಯ ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವಯುತವಾಗಿ ನೆರವೇರಿತು.
ಶ್ರೀ ಹೊನ್ನಮರಡಿ ರಂಗನಾಥ ಸ್ವಾಮಿ ಬೆಟ್ಟದ ಮೇಲೆ ಶ್ರೀ ಉಡುಸಲಮ್ಮ ದೇವಿ ಆಗಮನದೊಂದಿಗೆ ನಡೆದ ಗಂಡುಗತ್ರಿ ಮುಳ್ಳಾವಿಗೆ ಉರುವತ್ತಿ ಮತ್ತು ದೊಡ್ಡ ಊಳಗ ಕಾರಣಿಕ, ಬಸವನ ಮೆರವಣಿಗೆಯನ್ನು ಭಕ್ತರು ಕಣ್ತುಂಬಿಕೊಂಡರು. ಜಾತ್ರೆ ಅಂಗವಾಗಿ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದಿದ್ದು, ದೇವಸ್ಥಾನದ ಆಡಳಿತ ಮಂಡಳಿ, ವಿವಿಧ ಗ್ರಾಮಗಳ ಗ್ರಾಮಸ್ಥರು ಹಾಗೂ ಭಕ್ತರ ಸಹಕಾರದಿಂದ ಅನ್ನದಾನ ನೆರವೇರಿತು.
ವರದಿ: ಮಂಜುನಾಥ್ ಡಿ, ನಿರುವಗಲ್.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.
