Document

Gubbi: ಅಂಗವಿಕಲತೆ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಷಯವಲ್ಲ–ಸಮಾಜಕ್ಕೆ ಸಂಬಂಧಿಸಿದ್ದು.

JANATAA24 NEWS DESK 

 

 

Gubbi: ಅಂಗವಿಕಲತೆ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಷಯವಲ್ಲ–ಸಮಾಜಕ್ಕೆ ಸಂಬಂಧಿಸಿದ್ದು.

 

Gubbi: ಅಂಗವಿಕಲತೆ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಷಯವಲ್ಲ–ಸಮಾಜಕ್ಕೆ ಸಂಬಂಧಿಸಿದ್ದು.

 

 

ಗುಬ್ಬಿ:   ಅಂಗವಿಕಲ್ಲಿ ಎಂಬುದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದು ಮಾತ್ರವಲ್ಲ, ಅದು ಇಡೀ ಸಮಾಜಕ್ಕೆ ಸಂಬಂಧಿಸಿದ ವಿಷಯ. ಮಾನವ ಸಂಪನ್ಮೂಲ ಯಾವುದೇ ಭಾಗ ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಾಲೂಕು ವೈದ್ಯಧಿಕಾರಿ ಡಾ.ಬಿಂದು ಮಾಧವ ತಿಳಿಸಿದರು.

ಪಟ್ಟಣದ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ, ಸ್ನೇಹಜೀವನ ಫೌಂಡೇಶನ್ ಆಶಯದಲ್ಲಿ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರವು ವಿಕಲಚೇತನರ ಪ್ರಮಾಣವನ್ನು ಕಡಿಮೆ ಮಾಡಲು ಹಲವಾರು ಯೋಜನೆಗಳನ್ನ ರೂಪಿಸಲಾಗಿದೆ. ವಿಕಲಚೇತನರರು ಅಂತರಾಷ್ಟ್ರೀಯ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಅವರನ್ನು ಆದರ್ಶವಾಗಿ ಇಟ್ಟುಕೊಂಡು ಇತರ ವಿಕಲಚೇತನರು ಮುಖ್ಯ ವಾಹಿನಿಯಲ್ಲಿ ಬರಲು ಮುಂದಾಗಬೇಕು. ಅಪಘಾತ ಸಂಭವಿಸುವುದರಿಂದ ಅಂಗವಿಕಲತೆ ಕಂಡುಬರುತ್ತದೆ. ದ್ವಿಚಕ್ರ ವಾಹನದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವುದರಿಂದ ಪೋಷಕರು ತಮ್ಮ ಮಕ್ಕಳು ವಾಹನದ ಹಿಂದೆ ವೇಗವಾಗಿ ಚಲಿಸುವದನ್ನು ನಿಲ್ಲಿಸಲು ತಮ್ಮ ಮಕ್ಕಳಿಗೆ ತಿಳಿಸಬೇಕು. ವಿಕಲಚೇತನರು ಇರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ಮಾತನಾಡಿ, ವಿಕಲಚೇತನರ ದಿನಾಚರಣೆಯನ್ನು ಮಾಡುವ ಮುಖ್ಯ ಉದ್ದೇಶವೇನೆಂದರೆ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು, ಅವರ ಘನತೆಯನ್ನು ಎತ್ತಿ ಹಿಡಿಯುವುದು ಮತ್ತು ಕಲ್ಯಾಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಇಂದು ಈ ವಿಶೇಷಚೇತನರ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

 

ಸಂಪನ್ಮೂಲ ವ್ಯಕ್ತಿ ಡಿ.ಲೋಕೇಶ ಮಾತನಾಡಿ, ವಿಕಲಚೇತನರಿಗೆ ಇರುವ ಪ್ರಮುಖ ಸವಾಲುಗಳಾದ ಪ್ರವೇಶ ಅರ್ಹತೆ ಕೊರತೆ, ಸಾಮಾಜಿಕ ತಾರತಮ್ಯ ಮತ್ತು ಕಳಂಕ ಕೊರತೆ, ಶೈಕ್ಷಣಿಕ ಸವಾಲುಗಳು, ಆರ್ಥಿಕ ಮತ್ತು ಉದ್ಯೋಗ ಸವಾಲುಗಳು, ಆರೋಗ್ಯದ ಸವಾಲು ಇವುಗಳನ್ನು ಸಮಾಜ ಮತ್ತು ಸರ್ಕಾರ ಒಟ್ಟಾಗಿ ಸೇರಿಕೊಂಡಾಗ ಮಾತ್ರ ಬಗೆಹರಿಸಬಹುದು. ವಿಕಲಚೇತನ ಉಂಟಾಗುವುದು ಹುಟ್ಟುವ ಮುಂಚೆ, ಹುಟ್ಟುವಾಗ, ಹುಟ್ಟಿದ ನಂತರ ಈ ಸಮಯದಲ್ಲಿ ಜಾಗೃತರಾಗಿದ್ದರೆ ಅಂಗವಿಕಲತೆಯ ಪ್ರಮಾಣ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

 

ಈ ಕಾರ್ಯಕ್ರಮದಲ್ಲಿ ವಿಕಲಚೇತನ ಕ್ರೀಡಾಪಟುಗಳಾದ ಗಂಗರಾಜು, ಯತೀಶ್ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.

 

ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸಮುದಾಯ ಸಂಘಟಕರಾದ ಲೋಕನಾಥ್, ದಿವ್ಯಂಗ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಶಿವಕುಮಾರ್, ಅಧ್ಯಕ್ಷ ಜಯರಾಮಯ್ಯ, ಬಿ.ಟಿ ಗಿರೀಶ್ ಕುಮಾರ್, ಆರೋಗ್ಯ ಅಧಿಕಾರಿ ರಮೇಶ್, ಯು ಆರ್ ಡಬ್ಲ್ಯೂ ಮೋಹನ್, ವಿ ಆರ್ ಡಬ್ಲ್ಯೂ, ವಿಕಲಚೇತನರು, ಹಾಗೂ ಪೋಷಕರು ಇತರರು ಉಪಸ್ಥಿತರಿದ್ದರು.

 

ವರದಿ :ಶ್ರೀಕಾಂತ್ ಗುಬ್ಬಿ.


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *