JANATAA24 NEWS DESK
Gubbi: ಕಳೆದ ಏಳು ವರ್ಷಗಳಿಂದ ಸರ್ಕಾರದಿಂದ ಯಾವುದೇ ವಸತಿ ಯೋಜನೆ ದೊರೆತಿಲ್ಲ –ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು*

ಗುಬ್ಬಿ : ತಾಲೂಕಿನ ಚೇಳೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪ ತಹಸಿಲ್ದಾರ್ ಕಚೇರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಚೇಳೂರು ಮತ್ತು ಹಾಗಲವಾಡಿ ಗ್ರಾಮಗಳಲ್ಲಿ ಸ್ವಂತ ನಾಡಕಚೇರಿ ಕಟ್ಟಡವಿಲ್ಲದೆ ಬಾಡಿಗೆ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು ಈಗ ಸರ್ಕಾರದ ಅನುದಾನದಿಂದ ಸ್ವಂತ ಕಟ್ಟಡವನ್ನು ಹೊಂದಿವೆ. ಸುಮಾರು ಏಳು ವರ್ಷಗಳಿಂದ ಸರ್ಕಾರದಿಂದ ಯಾವುದೇ ಮನೆಗಳು ಬಂದಿರುವುದಿಲ್ಲ ಸದ್ಯದಲ್ಲೇ ನಾಲ್ಕು ಸಾವಿರ ಮನೆಗಳನ್ನು ವಸತಿ ಇಲಾಖೆಯಿಂದ ಬರುತ್ತವೆ ಆಗ ಗ್ರಾಮೀಣ ಬಾಗದ ಜನರಿಗೆ ಒದಗಿಸುತ್ತೇನೆ ಎಂದಅವರು
ಜಲ್ ಜೀವನ್ ಮಿಷನ್ ಯೋಜನೆಯಲ್ಲಿ ಹಾಗಲವಾಡಿ ಗ್ರಾಮದಲ್ಲಿ ಭೂಮಿ ಪೂಜೆ ಇದ್ದು, ಮುಂದಿನ ದಿನಗಳಲ್ಲಿ ಚೇಳೂರಿನಲ್ಲಿಯೂ ಕೂಡ ಶೀಘ್ರವಾಗಿ ಜಲಜೀವನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುಬ್ಬಿ ತಹಸಿಲ್ದಾರ್ ಬಿ ಆರತಿ, ಉಪಸಹಸಿಲ್ದಾರ್ ನಾಗಭೂಷಣ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಜಾತ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಿಜಯಲಕ್ಷ್ಮಿ, ರಾಜಣ್ಣ, ಸಿ ಎಚ್ ಕುಮಾರ್ ಕಂದಾಯ ತನಿಖಾಧಿಕಾರಿ ಬಸವರಾಜು, ಗ್ರಾಮ ಲೆಕ್ಕಿಗರಾದ ಸುಮತಿ, ಶಿವಕುಮಾರ್, ಮಹೇಶ್, ಭಾನುಪ್ರಕಾಶ್,ಕಾರ್ತಿಕೇಯನ್ ಹಾಗೂ ನಾಡಕಚೇರಿಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.