JANATAA24 NEWS DESK
Gubbi: ಜನವರಿ 26 ರಂದು ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ಅದ್ದೂರಿ ರಥೋತ್ಸವ.

ಗುಬ್ಬಿ : ಜನವರಿ 26 ರಂದು ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ಅದ್ದೂರಿಯಾಗಿ ಜರುಗಲಿದೆ ಎಂದು ಗುಡಿಗೌಡ ಭಾನುಪ್ರಕಾಶ್ ತಿಳಿಸಿದರು.
ತಾಲ್ಲೂಕಿನ ಕಡಬ ಹೋಬಳಿಯ ಯಡವನಳ್ಳಿ ಭಜರೆ ಕಡೆಕೋಡಿಪಾಳ್ಯ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಜನವರಿ 26 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಲಿದ್ದು ರಥೋತ್ಸವಕ್ಕೆ 10 ಸಾವಿರಕ್ಕಿಂತ ಹೆಚ್ಚಿನ ಭಕ್ತರು ಆಗಮಿಸಲಿದ್ದಾರೆ ಹಾಗೂ ಜಾತ್ರೆಗೆ ಬರುವ ಎಲ್ಲಾ ಭಕ್ತಾದಿಗಳಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದರು.
ಮಹಾಲಿಂಗಯ್ಯ ಮಾತನಾಡಿ ಶ್ರೀ ಆಂಜನೇಯ ಸ್ವಾಮಿಯ ದೇವಾಲಯವು ಪುರಾತನ ಕಾಲದ ದೇವಾಲಯವಾಗಿದ್ದು. ಪ್ರತಿ ವರ್ಷ ಜನವರಿ 26 ರಂದು ವಿಶೇಷವಾಗಿ ರಥೋತ್ಸವ ನಡೆಯುತ್ತದೆ. ಭಕ್ತರು ಜಾತ್ರೆಗೆ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಬಾಲಾಜಿ, ಮಹಾದೇವಯ್ಯ, ರಾಜಣ್ಣ, ಶ್ರೀನಿವಾಸ್, ಪಾತಯ್ಯ, ಸಣ್ಣಕರಿಯಪ್ಪ, ನಾಗರಾಜು, ನಟರಾಜ್, ಮೋಹನ್ ಕುಮಾರ್, ಗಂಗಾಧರಯ್ಯ, ಚಿಕ್ಕಣ್ಣ, ಹನುಮಂತಯ್ಯ, ಲಕ್ಷ್ಮಣ, ವೈ ಎನ್ ಮಹಾಲಿಂಗಯ್ಯ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ : ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.