JANATAA24 NEWS DESK
Gubbi: ಫೆ-3 ರಂದು ಗುಬ್ಬಿ ಪ.ಪಂ.ಆಯ-ವ್ಯಯ ಮಂಡನೆ.

ಗುಬ್ಬಿ : ಪ.ಪಂ. ಆಡಳಿತಾಧಿಕಾರಿಗಳು ಹಾಗೂ ತಹಶೀಲ್ದಾರ್ ಆರತಿ ಬಿ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 03ರ ಮಂಗಳವಾರ ಬೆಳಿಗ್ಗೆ 11:00 ಗಂಟೆಗೆ 2026-27ನೇ ಸಾಲಿನ ಯು ಆಯವ್ಯಯದ ಬಗ್ಗೆ ಚರ್ಚಿಸಲು ಸಭೆಯನ್ನು ಕರೆಯಲಾಗಿದೆ ಎಂದು ಮುಖ್ಯಾಧಿಕಾರಿ ಮಂಜುಳಾ ದೇವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2026-27ನೇ ಸಾಲಿನ ಆಯಾ-ವ್ಯಯದ ಬಗ್ಗೆ ಹಾಗೂ ಗುಬ್ಬಿ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಎಲ್ಲಾ ಸಂಘ ಸಂಸ್ಥೆಯ ಅಧ್ಯಕ್ಷರು/ಕಾರ್ಯದರ್ಶಿ/ಪದಾಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚಿಸಲು ಹಾಗೂ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ಪಡೆಯಲು ಫೆಬ್ರವರಿ 03 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಗುಬ್ಬಿ ನಗರವನ್ನು ಅಭಿವೃದ್ದಿ ಪಡಿಸಲು ತಮ್ಮಗಳ ಸಹಕಾರ ಕೋರಿ ಸಭೆಯನ್ನು ಏರ್ಪಡಿಸಲಾಗಿದ್ದು, ಸದರಿ ಸಭೆಗೆ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಖುದ್ದು ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.