JANATAA24 NEWS DESK
Gubbi: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸರಣಿ ಅಪಘಾತ.!

ಗುಬ್ಬಿ : ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಅರಣ್ಯ ಭಾಗದಲ್ಲಿ ಕಾರು ಲಾರಿ ಹಾಗೂ ಗೂಡ್ಸ್ ವಾಹನವೊಂದು ಸರಣಿ ಅಪಘಾತವಾಗಿರುವಂತಹ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 78 ಕಾಮಗಾರಿ ಇನ್ನೂ ಸರಿಯಾಗಿ ಪೂರ್ಣಗೊಂಡಿಲ್ಲದೆ ಇರುವುದೇ ಈ ಅಪಘಾತಗಳಿಗೆ ಕಾರಣವಾಗುತ್ತಿದೆ ಪ್ರತಿನಿತ್ಯ ಒಂದಲ್ಲ ಒಂದು ಭಾಗದಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಲೇ ಇವೆ ಯಾವಾಗ ರಸ್ತೆಯನ್ನು ಕೀಳುತ್ತಾರೆ ಎಲ್ಲಿ ಡಾಂಬರೀಕರಣ ನಡೆಯುತ್ತಿರುತ್ತದೆ ಎಂಬುದು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅರ್ಥವಾಗುತ್ತಲೇ ಇಲ್ಲ ಹಾಗಾಗಿ ಸಾಕಷ್ಟು ವಾಹನಗಳು ಅಪಘಾತಕ್ಕೀಡಾಗುತ್ತಿರುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
ಶಿವಸಂದ್ರ ಗೇಟ್ ನ ಅರಣ್ಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯನ್ನು ಗುಂಡಿ ಬಿದ್ದಿದ್ದನ್ನು ತಪ್ಪಿಸಲು ಹೋಗಿ ಆಯಾ ತಪ್ಪಿ ಕಾರಿಗೆ ಲಾರಿಯೊಂದು ತಾಗಿಸಿದ್ದು ಲಾರಿ ಅಪಘಾತ ತಪ್ಪಿಸಲು ಗೂಡ್ಸ್ ವಾಹನವೊಂದು ರಸ್ತೆಯಿಂದಲೇ ಸಂಪೂರ್ಣವಾಗಿ ಆಚೆಗೆ ಹೋಗಿರುವಂತಹ ಘಟನೆ ನಡೆದಿದೆ.
ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಷ್ಟ್ರೀಯ ಹೆದ್ದಾರಿಯವರು ಕೂಡಲೇ ಇಂತಹ ತಪ್ಪುಗಳು ಆಗದಂತೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿಯನ್ನ ಮಾಡಿದ್ದಾರೆ.
ವರದಿ :ಶ್ರೀಕಾಂತ್ ಗುಬ್ಬಿ.
Gubbi: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.