JANATAA24 NEWS DESK
Gubbi: ವಿಶೇಷ ಅನುದಾನದಿಂದ ಅಭಿವೃದ್ಧಿಗೆ ವೇಗ– ಶಾಸಕ ಎಸ್ ಆರ್ ಶ್ರೀನಿವಾಸ್.

ಗುಬ್ಬಿ : ಕ್ಷೇತ್ರಕ್ಕೆ ಈಗಾಗಲೇ ವಿಶೇಷ ಅನುದಾನಗಳು ಬಂದಿರುವುದರಿಂದ ಅಭಿವೃದ್ಧಿಗೆ ವೇಗ ನೀಡಲಾಗಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಕೋಣನಕಲ್ಲು ,ಬೈಚೇನಹಳ್ಳಿ, ಚೌಕೋನಹಳ್ಳಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು
ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 50 ಕೋಟಿ, ಹೇಮಾವತಿ ಇಲಾಖೆಯಿಂದ 100 ಕೋಟಿ, ಎತ್ತಿನಹೊಳೆ ಯೋಜನೆಯಿಂದ 30 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ನೀಡಿದ್ದು ಕ್ಷೇತ್ರದಲ್ಲಿ ಅಭಿವೃದ್ಧಿಯ ಕೆಲಸಗಳು ನಡೆಯುತ್ತಿವೆ. ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ ಆರ್ ಬಿ ಐ ಸರಿಯಾಗಿ ಕೆಲಸ ನಿರ್ವಹಣೆ ಮಾಡಬೇಕು. ಇನ್ನೂ ಸರಿಯಾದ ಸಮಯಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅವರ ಖಾತೆಗೆ ಹಾಕಲಾಗುತ್ತಿದೆ ಇದರಿಂದ ಅವರ ಆರ್ಥಿಕ ಮಟ್ಟ ಮತ್ತು ಜೀವನ ಸುಧಾರಿಸುತ್ತದೆ ಎಂದರು. ಯಾರಾದರೂ ಔತಣಕೂಟವನ್ನು ಏರ್ಪಡಿಸಿದರೆ ಒಂದು ಕಡೆ ಸೇರಿದರೆ ಅದನ್ನೇ ಇಟ್ಟುಕೊಂಡು ಗೊಂದಲ ಸೃಷ್ಟಿಸಬಾರದು, ಅಪಪ್ರಚಾರ ಮಾಡಬಾರದು ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಯೋಗೀಶ್, ಮುಖಂಡರಾದ ಬಿದರೆ ಯತೀಶ್, ಶಿವಾಜಿ ರಾವ್, ಮಂಜುನಾಥ್, ಹಲವು ಮುಖಂಡರು. ಗುತ್ತಿಗೆದಾರರಾದ ಬಸವರಾಜು, ಅಶೋಕ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.