Document

ಎಸ್ ಬಿ ಜಿ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ : ಗೆದ್ದ ಅಭ್ಯರ್ಥಿಗಳಿಗೆ ಶುಭ ಕೋರಿದ ತಾಲೂಕು ದಂಡಾಧಿಕಾರಿ.

Janataa24 NEWS DESK

IMG 20230701 WA0030

ತುರುವೇಕೆರೆಯ ಎಸ್ ಬಿ ಜಿ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ , ಗೆದ್ದ ಅಭ್ಯರ್ಥಿಗಳಿಗೆ ಶುಭ ಕೋರಿದ ತಾಲೂಕು ದಂಡಾಧಿಕಾರಿ.



ತುರುವೇಕೆರೆ: ಟಿ ಬಿ ಕ್ರಾಸ್ ನಲ್ಲಿರುವ ಎಸ್ ಬಿ ಜಿ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳಿಗೆ ಸಂಸತ್ ಚುನಾವಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,

IMG 20230701 WA0028



ಮುಖ್ಯೋಪಾಧ್ಯಯರಾದ ಗಿರೀಶ್ ವಿದ್ಯಾರ್ಥಿಗಳಿಗಾಗಿ ಸಂಸತ್ ರಚನೆ ಯಾಕೆ ಮಾಡಬೇಕು ಎಂಬುದರ ಬಗ್ಗೆ ಮಾತನಾಡಿದ ಅವರು



ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿ ಸಂಸತ್ತು ಸಹಕಾರಿ,ಮಕ್ಕಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು ವಿದ್ಯಾರ್ಥಿ ಸಂಸತ್ತು ತುಂಬ ಅಗತ್ಯ ಎಂದು ಹೇಳಿದರು.



ಜೊತೆಗೆ ಶಾಲೆಗಳಲ್ಲಿ ಸಂಸತ್ತು ರಚನೆ ಮಾಡಿ ಶಿಸ್ತು ಸಂಯಮ, ಸಮಯ ಪ್ರಜ್ಞೆಯೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸುವ ಕೆಲಸ ಒಳ್ಳೆಯದು, ಮಕ್ಕಳ ಸರ್ವಾಂಗಿನ ಅಭಿವೃದ್ಧಿಗಾಗಿ ಸರ್ಕಾರ ನಾನ ಯೋಜನೆಗಳನ್ನು ಜಾರಿಗೊಳಿಸಿದ್ದು .



ಅವುಗಳ ಸದುಪಯೋಗಕ್ಕೆ ಮುಂದಾಗಬೇಕು ,ಸಂಸತ್ ರಚನೆ ಕಾರ್ಯ ವೈಕರಿ ಮತ್ತು ಅಲ್ಲಿ ಸ್ವೀಕರಿಸುವ ನಿರ್ಣಯಗಳ ಬಗ್ಗೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಗಳ ಜೀವನದಲ್ಲಿ ಸರ್ಕಾರ ಹಾಗೂ ಮಂತ್ರಿಮಂಡಲ ಕುರಿತು ತಿಳಿದುಕೊಳ್ಳಬೇಕು,

IMG 20230701 WA0029



ಶಾಲೆಯ ವಿದ್ಯಾರ್ಥಿ ಸರ್ಕಾರದಲ್ಲಿ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು, ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ತಿಳಿಸಿದರು,

ಇದೇ ಸಂದರ್ಭದಲ್ಲಿ ತಾಲೂಕಿನ ದಂಡಾಧಿಕಾರಿಯಾದ ವೈ ಎಂ ರೇಣು ಕುಮಾರ್ ಈ ಚುನಾವಣೆಯಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

IMG 20230701 WA0027



ಸಂದರ್ಭದಲ್ಲಿ .ಶಾಲೆಯ ಸಂಸತ್ ರಚನೆ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಈ ಶಾಲೆಯ ಶಿಕ್ಷಕ ಶಿಕ್ಷಕಿಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ

ತುರುವೇಕೆರೆ: ಮಂಜುನಾಥ್

Document

Leave a Reply

Your email address will not be published. Required fields are marked *