Document

ಬಿಬಿಎಂಪಿ ಅಧಿಕಾರಿ ನಿವಾಸದಲ್ಲಿ ಕಂತೆ ಕಂತೆ ಹಣದ ಮೂಟೆ: ಭರ್ಜರಿ ಬೇಟೆಯಾಡಿದ ಲೋಕಾಯುಕ್ತ ಅಧಿಕಾರಿಗಳು

Janataa24 NEWS DESK


ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.

FudGk16aUAAaNg1

ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.

ಗಂಗಾಧರಯ್ಯರಿಗೆ ಸೇರಿದ ಯಲಹಂಕದಲ್ಲಿನ ಕಚೇರಿ, ಮಹಾಲಕ್ಷ್ಮಿ ಲೇಔಟ್ನಲ್ಲಿನ ಸಂಬಂಧಿಗಳ ನಿವಾಸ ಹಾಗೂ ಕುರುಬರಹಳ್ಳಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 1.5 ಕೋಟಿ ಹಣ, ವಿದೇಶಿ ಕರೆನ್ಸಿ, 2 ಕೋಟಿ ರೂ.ಗಳಿಗೂ ಹೆಚ್ಚಿನ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

bbmp officer

ಎಸ್’ಪಿ. ಅಶೋಕ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಅಂದಾಜು ಮೊತ್ತ 1.5 ಕೋಟಿ ರೂಪಾಯಿ ನಗದು, 2 ಕೋಟಿ ರೂ.ಗಳಿಗೂ ಹೆಚ್ಚಿನ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.

ಅಲ್ಲದೇ, ವಿದೇಶಿ ಕರೆನ್ಸಿ ಕೂಡ ಮನೆಯಲ್ಲಿ ಸಿಕ್ಕಿವೆ. ಅಧಿಕಾರಿಗಳು ಇನ್ನೂ ಅವರ ನಿವಾಸ, ಕಚೇರಿಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಚುನಾವಣೆಯ ಕಾರ್ಯಕ್ಕೆ ನೇಮಕವಾಗಿದ್ದು, ಇವರ ಕಾರಿನ ಮೇಲೆ ಬ್ಯಾಟರಾಯನಪುರ ವಿಧಾನಸಭಾ‌ ಕ್ಷೇತ್ರದ ಸ್ಟಿಕ್ಕರ್ ಇರುವುದಾಗಿ ತಿಳಿದು ಬಂದಿದೆ.

Document

Leave a Reply

Your email address will not be published. Required fields are marked *