Janataa24 NEWS DESK
ಮಂಡ್ಯ
ಕಾಂಗ್ರೆಸ್ ಪಕ್ಷಕ್ಕೆ ನನಗೆ ಆಹ್ವಾನವಿರಲಿಲ್ಲ,
ಕಾಂಗ್ರೆಸ್ ಪಕ್ಷ ಅಂಬರೀಶ್ಗೆ ಅವಮಾನ ಮಾಡಿದೆ ಅಂದ ಸಂಸದೆ.

ಮಂಡ್ಯ: ನಾಗಮಂಗಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಸಂಸದೆ ಸುಮಲತಾ (Sumalatha Ambareesh) ಕಾಂಗ್ರೆಸ್ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ. ಬಿ ಜೆ ಪಿ ಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ.

ನಿಮ್ಮ ರಾಜ್ಯಾಧ್ಯಕ್ಷರು ನನ್ನ ಬಗ್ಗೆ ಕೊಟ್ಟಿರುವ ಹೇಳಿಕೆಗಳನ್ನು ಗಮನಿಸಿ. ಆ ನಂತರ ನನ್ನ ನಿರ್ಧಾರ ಬಗ್ಗೆ ಪ್ರಶ್ನೆ ಮಾಡಿ ಎಂದ ಅವರು. ಬಿಜೆಪಿ ಪಕ್ಷ ಅತ್ಯಂತ ಗೌರವದಿಂದ ಆಹ್ವಾನಿಸಿದರು ಎಂದು ತಿಳಿಸಿದ್ದಾರೆ. ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದು ಬಿಜೆಪಿ, ನೀವು ಪಕ್ಷಕ್ಕೆ ಬಂದ್ರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದ್ರು. ಬಿಜೆಪಿ ಸರ್ಕಾರ ಬೆಂಗಳೂರು – ಮೈಸೂರಲ್ಲಿ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದಾರೆ. 12 ಕೋಟಿ ವೆಚ್ಚದಲ್ಲಿ ಸುಂದರ ಸ್ಮಾರಕ ನಿರ್ಮಿಸಿದ್ದಾರೆ. ಅಂಬರೀಶ್ ಅವರು ಬಿಜೆಪಿ ಪಕ್ಷದಲ್ಲಿದ್ರಾ? 27 ವರ್ಷ ಕಾಂಗ್ರೆಸ್ ಸೇವೆ ಸಲ್ಲಿಸಿದ್ದಾರೆ. ಈ ನಡುವೆ ಜೆಡಿಎಸ್ನ ಹಲವರು ಅಂಬರೀಶ್ ಆತ್ಮೀಯರು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಆತ್ಮೀಯತೆ ಇದ್ದಮೇಲೆ ಅಧಿಕಾರದಲ್ಲಿದ್ದಾಗ ಇವರೇಕೆ ಸ್ಮಾರಕ ಮಾಡುವ ಕೆಲಸ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯದಲ್ಲಿ ದಾಳಿ ನಡೆಸುತ್ತಿದ್ದಾರೆ: ಹೆಚ್ಡಿಕೆ ವಾಗ್ದಾಳಿ ಅಂಬರೀಶ್ಗೆ ಸ್ವಾಭಿಮಾನ ಇತ್ತು: ಅಂಬರೀಶ್ ಅವರಿಗೆ ಕೊನೆಯ ಎರಡು ವರ್ಷ ಕಾಂಗ್ರೆಸ್ ಅವಮಾನದಿಂದ ನಡೆಸಿಕೊಂಡಿದೆ. ಅದಕ್ಕೆಲ್ಲಾ ನಾನೇ ಸಾಕ್ಷಿ. ಅವಮಾನ ಆಗಿದ್ದರಿಂದ ಚುನಾವಣೆಗೆ ನಿಲ್ಲಬಾರದು ಎಂದು 2018ರಲ್ಲಿ ಬಿ-ಫಾರಂ ಎಸೆದಿದ್ದರು. ಅಂತಹ ಸ್ವಾಭಿಮಾನ ಅಂಬರೀಶ್ ಅವರಿಗೆ ಇತ್ತು ಎಂದು ಗುಡುಗಿದ್ದಾರೆ.