KSRTC : ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ಬಸ್ಸಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ

Janataa24 NEWS DESK

KSRTC : ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ಬಸ್ಸಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ

KSRTC Basavaraju
ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ

ಶಿವಮೊಗ್ಗ :ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನಲ್ಲೇ ಡ್ರೈವರ್ ಕಂ ಕಂಡಕ್ಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೊನ್ನಾಳಿ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ್ (38)(Basavaraju) ಆತ್ಮಹತ್ಯೆಗೆ ಯತ್ನಿಸಿದವರು.

10 ವರ್ಷದಿಂದ ಕೆಎಸ್‌ಆರ್‌ಟಿಸಿಯಲ್ಲಿ ಕಾರ್ಯನಿರ್ವಹಿಸುತ್ತ ಸೇವೆ ಸಲ್ಲಿಸುತ್ತಿರುವ ಬಸವರಾಜ್ ಅವರು ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಕುಡಿದು ಬಸ್‌ನಲ್ಲೇ ಒದ್ದಾಡುತ್ತಿರುವ ದೃಶ್ಯ ಲಭ್ಯವಾಗಿದೆ.

ಹೊನ್ನಾಳ್ಳಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್‌ನನ್ನು ಅಧಿಕಾರಿಗಳು ವಿಚಾರಣೆಗೆಂದು ಕರೆಸಿಕೊಂಡಿದ್ದರು. ತನ್ನ ವಿರುದ್ಧ ದಾಖಲಾಗಿದ್ದ ಕೇಸ್‌ಗೆ ಮನ ನೊಂದ ಬಸವರಾಜ್‌ ಶಿವಮೊಗ್ಗ-ಭದ್ರಾವತಿ ಮಾರ್ಗವಾಗಿ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ.

ನಿನ್ನೆ ಶನಿವಾರ ಸುಮಾರು ಮಧ್ಯಾಹ್ನ 2 ಗಂಟೆ ವಿಷ ಸೇವಿಸಿ ಒದ್ದಾಡುತ್ತಿದ್ದ ಬಸವರಾಜ್‌ನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆರೋಗ್ಯದಲ್ಲಿ ಚೇತರಿಸಿ ಕೊಳ್ಳುತ್ತಿದ್ದಾರೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Belagavi : ಬೆಳಗಾವಿ ನಗರದ ಸಂಚಾರಿ ಪೊಲೀಸ್ ಕ್ಯಾಂಪ್ ನಲ್ಲಿ ಅಪರಿಚಿತ ಶವ ಪತ್ತೆ

Leave a Reply

Your email address will not be published. Required fields are marked *