Gubbi: ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಬೇಕು– ಭಾರತಿ ಶ್ರೀನಿವಾಸ್.

Janataa24 NEWS DESK 

 

 

Gubbi: ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಬೇಕು–ಭಾರತಿ ಶ್ರೀನಿವಾಸ್.

ಗುಬ್ಬಿ: ಮಹಿಳೆಯರು ಬಲಹೀನರಾಗದೆ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆಯಬೇಕು ಇದರಿಂದ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.

 

ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು

 

ಮಹಿಳೆಯರು ಶೈಕ್ಷಣಿಕವಾಗಿ ಆರ್ಥಿಕವಾಗಿ, ದೈಹಿಕವಾಗಿ ಸದೃಢರಾದರೆ ಕುಟುಂಬವು, ದೇಶವು ಆರ್ಥಿಕವಾಗಿ ಸದೃಢವಾಗುತ್ತದೆ. ಮಹಿಳೆಯು ಕುಟುಂಬದ ಕಣ್ಣಾಗಿರಬೇಕು ಹಾಗೂ ಸಂಸಾರದ ಕಣ್ಣಾಗಿರಬೇಕು ಹಾಗೂ ಮಕ್ಕಳಿಗೂ ಗುರು ಆಗಿರುತ್ತಾಳೆ. ಭಾರತೀಯ ಪರಂಪರೆಯಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ನೀಡಿದ್ದು. ಪ್ರತಿಯೊಬ್ಬರೂ ಹೆಣ್ಣನ್ನು ಗೌರವಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು. ಮಹಿಳೆಯರು ಅಡಿಗೆ ಮನೆಗೆ ಸೀಮಿತವಾಗದೆ, ಕೃಷಿ ಹೈನುಗಾರಿಕೆಯನ್ನು ಮಾಡುವ ಮೂಲಕ ಹಾರ್ದಿಕ ಪ್ರಗತಿಯತ್ತ ಸಾಗಬೇಕು ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

 

ತಹಶೀಲ್ದಾರ್ ಬಿ ಆರತಿ ಮಾತನಾಡಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಕುಟುಂಬವು ಪ್ರೋತ್ಸಾಹಿಸಿದರೆ ವಿಶ್ವದಲ್ಲಿ ಅತ್ಯುನ್ನತವಾದ ಹುದ್ದೆಗಳನ್ನು ಅಲಂಕರಿಸುತ್ತಾರೆ. ಈಗಾಗಲೇ ಮಹಿಳೆಯು ಶಿಕ್ಷಣ, ಕ್ರೀಡೆ, ಉದ್ಯಮ ರಾಜಕೀಯ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿದ್ದಾರೆ. ಮಹಿಳೆಯರು ಸಣ್ಣ ಸಣ್ಣ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು. ಇದೇ ವೇಳೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

 

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತ, ಮುಖ್ಯಾಧಿಕಾರಿ ಮಂಜುಳಾದೇವಿ, ಬಿ ಇ ಓ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ, ಸೇರಿದಂತೆ ಇತರರು ಹಾಜರಿದ್ದರು.

 

ವರದಿ : ಶ್ರೀಕಾಂತ್ ಗುಬ್ಬಿ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Leave a Reply

Your email address will not be published. Required fields are marked *