Janataa24 NEWS DESK
Turuvekere: ಕೋಮುವಾದ ಧಿಕ್ಕರಿಸಿ, ಸಂವಿಧಾನ ರಕ್ಷಿಸಿ ಮೇ|8 ರಂದು ಬೆಂಗಳೂರಿನಲ್ಲಿ ಜನ ಕ್ರಾಂತಿ ಸಮಾವೇಶ.

ತುರುವೇಕೆರೆ: ಪಟ್ಟಣದ ಹೃದಯ ಭಾಗದಲ್ಲಿರುವ ಆದಿ ಜಾಂಬವ ಕಚೇರಿಯಲ್ಲಿ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ,47/74/75 (ರಿ) ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕರಾದ ದಂಡಿನ ಶಿವರ ಕುಮಾರ ಇವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು,
ಇದೇ ವೇಳೆ ಮಾತನಾಡಿದ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನ ಶಿವರ ಕುಮಾರ್ ಮಾತನಾಡುತ್ತಾ ಇದೇ ತಿಂಗಳು ಮೇ 8 ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆ ವಸಂತ ನಗರದಲ್ಲಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 134ನೇ ಜನ್ಮದಿನದ ಅಂಗವಾಗಿ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಇವರ ಅಧ್ಯಕ್ಷತೆಯಲ್ಲಿ, ಕೋಮುವಾದ ದಿಕ್ಕರಿಸಿ, ಸಂವಿಧಾನ ರಕ್ಷಿಸಿ, ದಲಿತರ ಅಭಿವೃದ್ಧಿಗಾಗಿ ಜನಕ್ರಾಂತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಮುದಾಯದ ಬಂಧುಗಳು ನಾಯಕರು ಹೋರಾಟಗಾರರು ಆಗುವಮಿಸುತ್ತಿದ್ದು ತುರುವೇಕೆರೆ ತಾಲೂಕಿನ ಸಮುದಾಯದ ಬಂಧುಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಧ್ಯಮದ ಮುಖೇನ ಆಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರುಗಳಾದ ಶಿವನಂಜಪ್ಪ, ಬೋರಪ್ಪ, ಬಿ,ಪುರ ತಮ್ಮಯ್ಯ, ಕೆ ಟಿ ಗೋವಿಂದರಾಜ್, ಹಲವರು ಇದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.