JANATAA24 NEWS DESK
Gubbi: ನವೆಂಬರ್ 20ಕ್ಕೆ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿಯ ಹೂವಿನ ಮಹೋತ್ಸವ.

ಗುಬ್ಬಿ : ನವಂಬರ್ 20 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ ಅವರ ಹೂವಿನ ಮಹೋತ್ಸವಕ್ಕೆ ಈ ಬಾರಿ ಕಂಟ್ರೋಲ್ ರೂಂ ತೆಗೆದು ಬರುವ ಭಕ್ತರಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ನಹಿದಾ ಜಮ್ ಜಮ್ ತಿಳಿಸಿದರು.
ಇತಿಹಾಸ ಪ್ರಸಿದ್ಧ ಗೋಸಲ ಶ್ರೀ ಚನ್ನಬಸವೇಶ್ವರ ಸ್ವಾಮಿ ದಾಸೋಹ ಸಭಾಂಗಣದಲ್ಲಿ ಇಂದು ಕರೆದಿದ್ದ ಹೂವಿನ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷವೂ ಭಕ್ತಾದಿಗಳಿಂದ ಭಕ್ತಾದಿಗಳಿಗಾಗಿ ಭಕ್ತಾದಿಗಳಿಗೋಸ್ಕರ ನಡೆಸುವ ಈ ಹೂವಿನ ಮಹೋತ್ಸವ ಇದಾಗಿದ್ದು, ಪ್ರತಿ ಬಾರಿಯೂ ಜಾತ್ರೆ ಹಾಗೂ ಹೂವಿನ ಮಹೋತ್ಸವ ವೇಳೆ ವಿದ್ಯುತ್ ಸಮಸ್ಯೆ ಉದ್ಭವಿಸುವ ಬಗ್ಗೆ ಹಾಗೂ ಲ್ಯಾಂಡ್ ಆರ್ಡರ್ ಆಗದ ಇರುವಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಉಳಿದಂತೆ ಲೋಕೋಪಯೋಗಿ ಇಲಾಖೆಯು ವಾಹನದ ಪರಿಶೀಲನೆ ನಡೆಸಲು ಸೂಚಿಸಿದ್ದು, ಉಳಿದಂತೆ ಆರೋಗ್ಯ ಇಲಾಖೆ, ಅಗ್ನಿ ಶಾಮಕ ದಳ, ಆಹಾರ ಇಲಾಖೆ ತನ್ನ ಜವಾಬ್ದಾರಿಯನ್ನು ನಿರ್ವಹಣೆ ಮಾಡಲು ಸೂಚಿಸಲಾಗಿದೆ. ಜೊತೆಗೆ ಈ ಬಾರಿ ಕಂಟ್ರೋಲ್ ರೂಂ ತೆರೆದು ಬರುವ ಭಕ್ತರಿಗೆ ಸಮಸ್ಯೆ ಉದ್ಭವ ಉಂಟಾದರೆ ಸಂಪರ್ಕಿಸಲು ಅನುಕೂಲ ಮಾಡಲು ಸೂಚಿಸಿದ್ದು, ವಿಭಿನ್ನ ರೀತಿಯಲ್ಲಿ ವಿಭಿನ್ನವಾಗಿ ಹೂವಿನ ಮಹೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು.
ಸಭೆಗೆ ಬಂದಂತಹ 18 ಕೋಮಿನ ಮುಖಂಡರು, ಭಕ್ತಾದಿಗಳಿಂದ ಬೆಸ್ಕಾಂ ಹಾಗೂ ಪೊಲೀಸ್ ಇಲಾಖೆಯ ಮೇಲೆ ಉಪ ವಿಭಾಗಾಧಿಕಾರಿಗಳ ಮುಂದೆ ಅಸಮಾಧಾನ ವ್ಯಕ್ತವಾಗಿದ್ದು, ಪ್ರತಿ ಬಾರಿಯೂ ದೇವಾಲಯದ ಜಾತ್ರೆ, ಉತ್ಸವ ಸಮಯದಲ್ಲಿಯೇ ವಿದ್ಯುತ್ ಸಮಸ್ಯೆ, ಉತ್ಸವ ವೇಳೆ ಸ್ಥಳೀಯವಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಭೆಯಲ್ಲಿ ಪ.ಪಂ ಮುಖ್ಯಾಧಿಕಾರಿ ಮಂಜುಳಾ ದೇವಿ, ಪ.ಪಂ ಸದಸ್ಯರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉಂಡೆ ರಾಮಣ್ಣ, ಪಟೇಲ್ ಕೆಂಪೇಗೌಡರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಪ್ರಭಾರ ಪೆಷ್ಕಾರ್ ವಿನೋದ್, ಪ್ರಧಾನ ಅರ್ಚಕ ರಾಜೇಶ್, 18 ಕೋಮಿನ ಮುಖಂಡರು, ದಾಸೋಹ ಸಮಿತಿ ವ್ಯವಸ್ಥಾಪನ ಸಮಿತಿ ಹಾಗೂ ಅಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.