Document

RCB: ಬರೋಬ್ಬರಿ 17 ಸಾವಿರ ಕೋಟಿಗೆ ಮಾರಾಟವಾಯ್ತು ಆರ್ ಸಿ ಬಿ ಟೀಮ್..!

JANATAA24 NEWS DESK

RCB: ಬರೋಬ್ಬರಿ 17 ಸಾವಿರ ಕೋಟಿಗೆ ಮಾರಾಟವಾಯ್ತು ಆರ್ ಸಿ ಬಿ ಟೀಮ್..!

RCB

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು 16,779 ಕೋಟಿ ರೂ.) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ.

ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನ ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ. ಆರ್‌ಸಿಬಿ ಫ್ರಾಂಚೈಸಿಯಿಂದ ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಆದಿತ್ಯ ಬಿರ್ಲಾ ಗ್ರೂಪ್‌ನ ನಿರ್ದೇಶಕ ಆರ್ಯಮನ್ ವಿಕ್ರಮ್ ಬಿರ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದು, ಟೈಮ್ಸ್ ಆಫ್ ಇಂಡಿಯಾ ಗ್ರೂಪ್‌ನ ಸತ್ಯನ್ ಗಜ್ವಾನಿ ಫ್ರಾಂಚೈಸಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. 2026ರ 19ನೇ ಆವೃತ್ತಿಯ ಐಪಿಎಲ್‌ ಬಳಿಕ ಈ ಹೊಸ ಮಾಲೀಕತ್ವವು ಅಧಿಕೃತವಾಗಿ ಜಾರಿಗೆ ಬರಲಿದೆ. ಅಲ್ಲಿಯವರೆಗೆ ಡಿಯಾಜಿಯೊ ಸಂಸ್ಥೆಯೇ ತಂಡದ ಜವಾಬ್ದಾರಿಯನ್ನ ನಿರ್ವಹಿಸಲಿದೆ.

ಆರ್‌ಸಿಬಿ ಸೇಲ್‌ ಮಾಡಲು ಕಾರಣ ಏನು?
18ನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಬಳಿಕ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಯುನೈಟೆಡ್ ಸ್ಪಿರಿಟ್ಸ್ ಹೂಡಿಕೆದಾರರು ಆತಂಕ ಹೊರಹಾಕಿದ್ದರು. ಜೊತೆಗೆ ವಿರಾಟ್‌ ಕೊಹ್ಲಿ ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಯಿದೆ. ಕೊಹ್ಲಿ ನಿವೃತ್ತಿ ಹೇಳಿದರೆ ಆರ್‌ಸಿಬಿ ಮೌಲ್ಯ ಕುಸಿಯುವ ಸಾಧ್ಯತೆಯಿದೆ. ಈ ಕಾರಣಕ್ಕೆ ಆರ್‌ಸಿಬಿ ತಂಡವನ್ನ ಯುನೈಟೆಡ್ ಸ್ಪಿರಿಟ್ಸ್ ಮಾರಾಟ ಮಾಡಿದೆ ಎನ್ನಲಾಗ್ತಿದೆ.

 

ಡಿಯಾಜಿಯೊ ತೆಕ್ಕೆಗೆ ಆರ್‌ಸಿಬಿ ಹೋಗಿದ್ದು ಹೇಗೆ?

2008 ರಲ್ಲಿ ವಿಜಯ್‌ ಮಲ್ಯ ಒಡೆತನದ ಯುನೈಟೆಡ್‌ ಸ್ಪೀರಿಟ್ಸ್‌ ಆರ್‌ಸಿಬಿ ತಂಡವನ್ನು 111.6 ಮಿಲಿಯನ್‌ ಡಾಲರ್‌(ಆಗಿನ 700-800 ಕೋಟಿ ರೂ.) ನೀಡಿ ಖರೀದಿಸಿತ್ತು. 2012ರಲ್ಲಿ ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಕಾರ್ಯಾಚರಣೆ ನಿಲ್ಲಿಸಿತು. ಉದ್ಯಮದಲ್ಲಿ ನಷ್ಟವಾದ ಕಾರಣ ಮಲ್ಯ ಅವರ ಯುನೈಟೆಡ್ ಸ್ಪಿರಿಟ್ಸ್ ಕಂಪನಿಯನ್ನು ಡಿಯಾಜಿಯೊ ಸ್ವಾಧೀನಪಡಿಸಿಕೊಂಡಿತು. ಆರ್‌ಸಿಬಿಯಲ್ಲಿ ಯುನೈಟೆಡ್ ಸ್ಪಿರಿಟ್ಸ್ ಷೇರುಗಳು ಇದ್ದ ಕಾರಣ ಅದರ ಮಾಲೀಕತ್ವ ಡಿಯಾಜಿಯೊಗೆ (Diageo) ಹೋಗಿತ್ತು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *