Document

ವಾಹನ ಸವಾರನ ಮೇಲೆ ಕರಡಿ ದಾಳಿ: ಕುರಿಗಾಹಿಗಳಿಂದ ರಕ್ಷಣೆ

Janataa24 NEWS DESK

IMG 20230604 WA0002
ಈರಣ್ಣ ( ಕೃಷ್ಣ)


ಮಧುಗಿರಿ: ಕರಡಿ ದಾಳಿಗೆ ಒಳಗಾಗಿ ಗಾಯಗೊಂಡು ಪ್ರಗ್ನೆ ತಪ್ಪಿದ ದ್ವಿಚಕ್ರ ವಾಹನ ಸವಾರರನ್ನು ಕುರಿಗಾಹಿಗಳು ರಕ್ಷಿಸಿ ಆಸ್ಪತ್ರೆಗೆ ಸೇರಿಸಿರುವ ಘಟನೆ ನಡೆದಿದೆ.

IMG 20230604 WA0004





ತಾಲೂಕಿನ ಮಿಡಗೇಶಿ ಹೋಬಳಿಯ ಹನುಮಂತಪುರದ ವಾಸಿ ಈರಣ್ಣ ( ಕೃಷ್ಣ)38 ಮಿಡಗೇಶಿಯಿಂದ ಲಕ್ಲಿಹಟ್ಟಿಗೆ ಹನುಮಂತಪುರ ಮಾರ್ಗವಾಗಿ ಶುಕ್ರವಾರ ಸಂಜೆ ಸುಮಾರು 6:30ರ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈರಣ್ಣ ಬೆಟ್ಟದ ಹತ್ತಿರ ಎರಡು ಕರಡಿಗಳು ಪ್ರತ್ಯಕ್ಷವಾಗಿದ್ದವು ಇದರಲ್ಲಿ ದೊಡ್ಡ ಕರಡಿ ಹಲ್ಲೆ ಮಾಡಿದ್ದು ಗಾಬರಿಗೊಂಡ ದ್ವಿ ಚಕ್ರವಾಹನ ಸವಾರ ವಾಹ ದಿಂದ ನೆಲಕ್ಕೆ ಬಿದ್ದು ತಲೆಗೆ ಹಾಗೂ ಕೈಗೆ ಪೆಟ್ಟು ಮಾಡಿಕೊಂಡು ಅನ್ಯರ ಸಹಾಯದಿಂದ ಮಿಡಿಗೇಶಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆ ಸೇರಿದ್ದರು.



ಶನಿವಾರ ಸಂಜೆ ವಾಹನ ಸವಾರನ ಆರೋಗ್ಯ ದಲ್ಲಿ ಏರುಪೇರಾಗಿದ್ದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಗೆ ಚಿಕಿತ್ಸೆ ಗಾಗಿ ದಾಖಲಾಗಿದ್ದರು, ತಪಾಸಣೆ ನಡೆಸಿದ ವೈದ್ಯರು ಹೆಚ್ಚುವರಿ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು, ವಿಷಯ ತಿಳಿದ ಅರಣ್ಯಾಧಿಕಾರಿ ಮುತ್ತುರಾಜ್ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರಗಳನ್ನು ಕಲೆಹಾಕಿದ್ದಾರೆ.

IMG 20230604 WA0003

ವರದಿ

ಮಧುಗಿರಿ: ಅಭಿದ್

Document

Leave a Reply

Your email address will not be published. Required fields are marked *