Janataa24 NEWS DESK
Gubbi: ಯುವ ಪೀಳಿಗೆಯು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು– ತನುಜಾ ಬೆನಕಟ್ಟೆ.


ಗುಬ್ಬಿ : ಯುವ ಪೀಳಿಗೆಯು ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೆ ಸದೃಢ ರಾಷ್ಟ್ರ ನಿರ್ಮಾಣವಾಗುತ್ತದೆ ಎಂದುಗ್ರಾ ಪಂ ಅಭಿವೃದ್ಧಿ ಅಧಿಕಾರಿ ತನುಜಾ ಬೆನಕಟ್ಟೆ ತಿಳಿಸಿದರು.
ತಾಲೂಕಿನ ಕಡಬ ಹೋಬಳಿ ವ್ಯಾಪ್ತಿಯ ಮಾರಶೆಟ್ಟಿ ಹಳ್ಳಿ ಗ್ರಾಮದಲ್ಲಿ 134ನೇ ಅಂಬೇಡ್ಕರ್ ಜಯಂತಿಯನ್ನು ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಯುವಕ ಸಂಘದ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದವರು ತಂದೆ ತಾಯಿಗಳು ಮಕ್ಕಳಿಗಾಗಿ ಆಸ್ತಿ ಮಾಡದೆ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಡಾ. ಬಿ ಆರ್ ಅಂಬೇಡ್ಕರ್ ಅವರು ಅನೇಕ ಕಷ್ಟ ಕಾರ್ಪಣ್ಯಗಳ ಮಧ್ಯೆ ಶಿಕ್ಷಣವನ್ನು ಪಡೆದು ವಿಶ್ವ ವ್ಯಾಪಿ ವಿಶ್ವ ನಾಯಕರಾಗಿದ್ದಾರೆ.
ಅದೇ ರೀತಿಯಾಗಿ ಇಂದಿನ ಯುವ ಪೀಳಿಗೆಯು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೆ ಸದೃಢ ರಾಷ್ಟ್ರ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು .
ಗ್ರಾ,ಪಂ, ಅಧ್ಯಕ್ಷೆ ಯೋಗಿತ ಶಿವಕುಮಾರ್ ಮಾತನಾಡಿ ಸಂವಿಧಾನ ಶಿಲ್ಪಿ ಮಹಾ ಮಾನವತವಾದಿ ಡಾ, ಬಿ,ಆರ್ ಅಂಬೇಡ್ಕರ್ ಅವರ ಆದರ್ಶ ತತ್ವ ಸಿದ್ಧಾಂತಗಳನ್ನು ಅವರು ನಡೆದು ಬಂದ ಹಾದಿಯಲ್ಲಿ ನಾವು ಸಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿಗ್ರಾ, ಪಂ, ಸದಸ್ಯರಾದ ಚಂದ್ರಶೇಖರ್, ಸಿದ್ದರಾಮೇಗೌಡ, ಶಿವ ಸ್ವಾಮಿ ಎ ಬಿ, ಮುಖಂಡರಾದ ಶಿವಶಂಕರ ಬಾಬು, ನಾಗರಾಜು, ಗ್ರಾಮ ಪಂಚಾಯತಿ ಸಿಬ್ಬಂದಿ ಸೇರಿದಂತೆ ಅಂಬೇಡ್ಕರ್ ಯುವಕ ಸಂಘದ ಯುವಕರು ಗ್ರಾಮಸ್ಥರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.