Gubbi: ಹೈನುಗಾರಿಕೆಯಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ – ಎಸ್ ಆರ್ ಶ್ರೀನಿವಾಸ್ 

Janataa24 NEWS DESK 

 

Gubbi: ಹೈನುಗಾರಿಕೆಯಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ – ಎಸ್ ಆರ್ ಶ್ರೀನಿವಾಸ್.

Gubbi: ಹೈನುಗಾರಿಕೆಯಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ – ಎಸ್ ಆರ್ ಶ್ರೀನಿವಾಸ್ 
ಗುಬ್ಬಿ : ಹೈನುಗಾರಿಕೆಯಿಂದಾಗಿ ರೈತರು ಆರ್ಥಿಕ ಸ್ವಾವಲಂಬಿಗಳಾಗಿ ಜೀವನ ನಡೆಸಲು ಹಾಲು ಉತ್ಪಾದಕರ ಸಹಕಾರ ಸಂಘವು ಸಹಾಯಕವಾಗುತ್ತದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

 

ತಾಲೂಕಿನ ಆಡಗೊಂಡನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು

 

ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಸಹಾಯ ಒದಗಿಸುವ ದೃಷ್ಟಿಯಿಂದಾಗಿ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು ರೈತರು ಇದನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢವಾಗಬೇಕು.

ಹೈನುಗಾರಿಕೆಯಿಂದಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದಲ್ಲಿ ಅಭಿವೃದ್ಧಿ ಹೊಂದಲು ಸಹಕಾರಿ ಸಂಘವು ಸಹಕಾರಿ ಯಾಗುತ್ತದೆ ಎಂದು ತಿಳಿಸಿದರು.

 

ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ ತಾಲೂಕಿನಲ್ಲಿ ನೂರು ಹಾಲು ಉತ್ಪಾದಕರ ಸಹಕಾರಗಳನ್ನು ತೆರೆಯಲು ಗುರಿ ಹೊಂದಿದ್ದು ಉತ್ತಮ ಹಾಲು ಗುಣಮಟ್ಟದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಹಾಲು ಶೇಖರಣೆಯಲ್ಲಿ ತಾಲೂಕು ಮೂರನೇ ಸ್ಥಾನದಲ್ಲಿದೆ.

ನಾವು ಮೊದಲನೇ ಸ್ಥಾನಕ್ಕೆ ಹೋಗಬೇಕು ಎಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಗ್ರಾ,ಪಂ, ಉಪಾಧ್ಯಕ್ಷ ಪೂರ್ಣಿಮ ಶಿವಕುಮಾರ್, ಶಂಕರಾನಂದ, ಕಡಬ ಶಂಕರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್,ಕಾರ್ಯದರ್ಶಿ ಪುಟ್ಟಸ್ವಾಮಿ, ಶಿವಣ್ಣ, ರಂಗರಾಜು, ವಿನಯ್, ರವೀಶ್, ರಂಗೇಗೌಡ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ವರದಿ: ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Leave a Reply

Your email address will not be published. Required fields are marked *