Mandya: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಜಪ್ತಿ.

Janataa24 NEWS DESK

 

Mandya: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಜಪ್ತಿ.

 

mandy 1crore rupees seized by election commission officials janataa24 news kannada5698514007031496326

ಮಂಡ್ಯ: ಚುನಾವಣೆ ಕಾವೇರಿದ ಬೆನ್ನಲ್ಲೇ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ, ಮದ್ದೂರು ತಾಲ್ಲೂಕಿನ ಕೊಂಗಬೋರನದೊಡ್ಡಿ ಬಳಿಯ ಚೆಕ್‌ಪೋಸ್ಟ್‌ ಮೂಲಕ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 1ಕೋಟಿ (Crore) ಹಣವನ್ನು ಚುನಾವಣಾಧಿಕಾರಿಗಳು ಸೋಮವಾರ ಜಪ್ತಿ(Seize)ಮಾಡಿದ್ದಾರೆ.

 



ಗಿರೀಶ್ ಎಂಬುವವರು ಬೆಂಗಳೂರಿನಿಂದ ಹುಂಡೈ ಕ್ರೆಟಾ ಕಾರ್‌ನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಆರಂಭವಾಗಿರುವ ಚುನಾವಣಾ ಚೆಕ್‌ಪೋಸ್ಟ್‌ ಸಿಬ್ಬಂದಿ ತಡೆದು ತಪಾಸಣೆ ನಡೆಸಿದರು. ಈ ವೇಳೆ ಚೀಲದಲ್ಲಿ ತುಂಬಿಟ್ಟಿದ್ದ ನಗದು(Cash) ಪತ್ತೆಯಾಯಿತು.

 



ಈ ಬಗ್ಗೆ ಕಾರು ಮಾಲಿಕ ಗಿರೀಶ್‌ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದಾಗ  ಪೂರಕ ದಾಖಲೆಗಳನ್ನು ನೀಡದ ಪರಿಣಾಮ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗಳು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

 

ಮಳವಳ್ಳಿ ಡಿವೈಎಸ್‌ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಸ್ಥಳದಲ್ಲಿ ಹಾಜರಿದ್ದರು.

 

 

https://www.janataa24.com/suicide-a-mother-committed-suicide-by-throwing-her-two-children-into-the-fire/

ಕೆಳಗಿನ #ಲಿಂಕ್ ಬಳಸಿ #ಜನತಾ24   #ವಾಟ್ಸಾಪ್_ಗ್ರೂಪ್ ಸೇರಿರಿ  https://chat.whatsapp.com/Jf6jZ0gyQAEA5GBRpHnkrv

Subscribe YouTube
https://youtube.com/@janataa24?si=XsFcych2GMH0O6Gv

Leave a Reply

Your email address will not be published. Required fields are marked *