JANATAA24 NEWS DESK
Mysuru: ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಕಿರುಕುಳ- ಕುಲಪತಿ ಮೇಲೆ FIR ದಾಖಲಿಸುವಂತೆ ಸೂಚಿಸಿದ ಆಯೋಗ.

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ವಿ.ವಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
ವಿದ್ಯಾರ್ಥಿ ಕಾರ್ತಿಕ್ ಜಿ.ಎನ್. ಅವರು ನೀಡಿದ ದೂರಿನ ಆಧಾರದ ಮೇಲೆ, ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ಅಡಿಯಲ್ಲಿ ತಕ್ಷಣ ಎಫ್ಐಆರ್ ದಾಖಲಿಸುವಂತೆ ಆಯೋಗ ಆದೇಶಿಸಿದೆ.
ಏಪ್ರಿಲ್ 16ರಂದು ಆಯೋಗವು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಪತ್ರ ಬರೆದು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಡಾ.ಎಂ.ಸುರೇಶ್ ಬೆಂಜಮೀನ್, ಪ್ರೊ.ಆರ್.ಎಸ್.ಉಮಾಕಾಂತ್ ಮತ್ತು ಅಶ್ವಥ್ ಪ್ರಸಾದ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ. ಜತೆಗೆ ಎಫ್ಐಆರ್ ಪ್ರತಿಯನ್ನು ಕೂಡಲೇ ಆಯೋಗಕ್ಕೆ ಸಲ್ಲಿಸುವಂತೆಯೂ ಸೂಚನೆ ನೀಡಲಾಗಿದೆ.
ಆರೋಪಗಳ ವಿವರ
ವಿದ್ಯಾರ್ಥಿ ಕಾರ್ತಿಕ್ ಅವರಿಗೆ ಜಾತಿ ಆಧಾರಿತ ಹಿಂಸೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪಗಳೊಂದಿಗೆ, ನ್ಯಾಯ ಕೇಳಲು ಹೋದಾಗ ಅವಮಾನಕಾರಿ ವರ್ತನೆ ತೋರಿದ್ದು, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ಆರೋಪಗಳೂ ದಾಖಲಾಗಿವೆ. ಇದಲ್ಲದೆ ದೂರು ನೀಡಲು ಹೋದಾಗ ಪೊಲೀಸರು ಸಹ ನಿರ್ಲಕ್ಷ್ಯ ತೋರಿದ ಆರೋಪ ಕೂಡ ಹೊರಬಂದಿದೆ.
ಈ ಘಟನೆಯು ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ವಿಶ್ವವಿದ್ಯಾಲಯದಂತಹ ಉನ್ನತ ಶಿಕ್ಷಣ ಸಂಸ್ಥೆಯಲ್ಲೇ ಜಾತಿ ಹಿಂಸೆ ನಡೆಯುತ್ತಿದೆ ಎಂಬ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಆಯೋಗದ ಈ ಕಠಿಣ ಆದೇಶದ ನಂತರ ಮುಂದಿನ ಕಾನೂನು ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.