Janataa24 NEWS DESK
Pavagada: ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ– ಮಂಡ್ಯ ಮೂಲದ ಬುಲೆರೋ ಚಾಲಕ ಸ್ಥಳದಲ್ಲೇ ಸಾವು.

ಪಾವಗಡ: ಪಟ್ಟಣದ ತುಮಕೂರು ರಸ್ತೆಯ ಎಸ್ ಆರ್ ಎಸ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬುಲೆರೋ ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎನ್ನುವರ 21 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ.
ತುಮಕೂರು ರಸ್ತೆಯಿಂದ ಪಾವಗಡದ ಕಡೆ ಬರುತ್ತಿದ್ದಂತಹ ಬುಲೆರೋ ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ,
ಲಾರಿಯ ಮುಂಭಾಗದಲ್ಲಿ ಓಮನಿಯೊಂದು ತೆರಳುತ್ತಿದ್ದು ಇದ್ದಕ್ಕಿದ್ದಂತೆ ಓಮಿನಿ ಯ್ಯೂಟರ್ನ್ ತೆಗೆದುಕೊಂಡಿದ್ದು ಲಾರಿ ಚಾಲಕ ತನ್ನ ವೇಗವನ್ನು ಕಡಿಮೆ ಮಾಡಿದ್ದಾನೆ, ಹಿಂದೆಯಿಂದ ಬರುತ್ತಿದ್ದ ಬುಲೆರೋ ವಾಹನ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ,
ಈ ಸ್ಥಳದಲ್ಲಿ ಈಗಾಗಲೇ ಹಲವು ಅಪಘಾತಗಳು ಸಂಭವಿಸಿ ಬಹಳ ಸೀನ ಮೃತ್ ಪಟ್ಟಂತ ಘಟನೆಗಳು ಸಂಭವಿಸಿವೆ.
ಅಪಘಾತಗಳಿಗೆ ಮೂಲ ಕಾರಣ ಕೆಶಿಪ್(KSHIP) ಸಂಸ್ಥೆ ಎಂದು ಹೇಳಬಹುದು.
ಇಷ್ಟ ಬಂದ ಕಡೆ ಡಿವೈಡರ್ ತೆರವು ಗೊಳಿಸಿರುವ ಕಾರಣ ಅಪಘಾತಗಳು ಸಂಭವಿಸಲು ಮೂಲ ಕಾರಣ ಎಂಬುದಾಗಿ ಸಾರ್ವಜನಿಕರ ಆರೋಪ ಆಗಿದೆ.
ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ(PSI) ಗುರುನಾಥ ಭೇಟಿ ನೀಡಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ..
ವರದಿ: ಇಮ್ರಾನ್ ಉಲ್ಲಾ ಪಾವಗಡ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
https://www.janataa24.com/miscreants-uprooted-40-coconut-trees-turuvekere/
Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.