Janataa24 NEWS DESK

ದೇಶದ ನಂಬರ್ ಒನ್ ಸೋಲಾರ್ ಘಟಕ ಆದ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಅಭಿವೃದ್ಧಿಗೊಳ್ಳಲು ಸಾಧ್ಯವಾಗಿದೆ: ಶಾಸಕ ವೆಂಕಟೇಶ್.
ಪಾವಗಡ: ತಾಲೂಕಿನ ತಿರುಮಣಿ ಗ್ರಾಮದಲ್ಲಿ ನೂತನವಾಗಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಸೋಲಾರ್ ಪ್ರಾಂತ್ಯ ಆದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸಿ.ಎಸ್.ಆರ್.ಅನುದಾನದಲ್ಲಿ ಕೋಟ್ಯಾನು ಗಟ್ಟಲೆ ವೆಚ್ಚದಲ್ಲಿ ಅಭಿವೃದ್ಧಿಿಧಿಗೊಳ್ಳುತ್ತಿದೆ.
ಗ್ರಾಮಗಳಲ್ಲಿ ಸಿಸಿ ರಸ್ತೆಗಳು ಚರಂಡಿ ತಂಗುಧಾಣಗಳು.
ರಾಜ್ಯದಲ್ಲಿಯೇ ಇಲ್ಲದಂತಹ ಮಾದರಿ ಹೈಟೆಕ್ ಸರ್ಕಾರಿ ಶಾಲೆಗಳ ಕಟ್ಟಡವನ್ನು ನಿರ್ಮಾಣ ಮಾಡಿದ್ದೇನೆ.
ಈಗ 76 ಲಕ್ಷ ವೆಚ್ಚದಲ್ಲಿ ಪಂಚಾಯಿತಿ ಕಾರ್ಯಾಲಯ ಕಟ್ಟಡ ಹಾಗೂ 29 ಲಕ್ಷ ವೆಚ್ಚದಲ್ಲಿ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣದ ಗುದ್ದಲಿ ಪೂಜೆ ಎಂದು ಮಾಡಲಾಗಿದೆ ಎಂದರು.
ಈ ಭಾಗದ ಜನರು ನನ್ನ ಗೆಲುವಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಿ ನಿಮ್ಮ ಋಣವನ್ನು ತೀರಿಸುತ್ತಿದ್ದೇನೆ ಎಂದರು.
ಮುಂದಿನ ದಿನಗಳಲ್ಲಿ ಇನ್ನೂ ಅಭಿವೃದ್ಧಿ ಕೆಲಸಗಳು ಮಾಡುವುದಾಗಿ ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ತಾಲೂಕು ಪಂಚಾಯಿತಿ ಇಒ ಜಾನಕಿ ರಾಮ್ .ಗ್ರಾಮ ಪಂಚಾಯತಿ ಅಧ್ಯಕ್ಷ ಲೋಕೇಶ್ ಚೌದರಿ. ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಅಂದಾನಪುರ ಲಕ್ಷ್ಮಿನಾರಣಪ್ಪ. ಮುಖಂಡ ನಾನಿ. ಮಾಜಿ ವಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚನ್ನಕೇಶವ. ಇತರೆ ಮುಖಂಡರು ಕಾರ್ಯಕರ್ತರು ಇದ್ದರು.
ವರದಿ: ಇಮ್ರಾನ್ ಉಲ್ಲಾ. ಪಾವಗಡ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://www.janataa24.com/pavagada-eight-laborers-injured-in-bus-accident/