JANATAA24 NEWS DESK
Turuvekere: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮ.

ತುರುವೇಕೆರೆ: ತಾಲೂಕಿನ ಗ್ರಾಮಾಂತರ ವ್ಯಾಪ್ತಿಗೆ ಸೇರುವ ಸಂಪಿಗೆ ಸಂಪಿಗೆ ಗ್ರಾಮದಲ್ಲಿ ವಲಯದ ಬ್ಯಾಲಹಳ್ಳಿ ಕಾರ್ಯಕ್ಷೇತ್ರದ ಕೆರೆ ಆಯ್ಕೆ ಹಾಗೂ ಕೆರೆಯ ಸಮಾಲೋಚನಾ ಸಭೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ನಿರ್ದೇಶಕರಾದ , ಸತೀಶ್ ಮಾತನಾಡುತ್ತಾ, ಸುವರ್ಣ ಕೆರೆ ಸಮಿತಿ ರಚನೆ ಮಾಡಿ ಸಮಿತಿಯ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಡೆಯುವ ನಮ್ಮೂರು ನಮ್ಮ ಕೆರೆ ಎಂಬ ಕಾರ್ಯಕ್ರಮವು ಕರ್ನಾಟಕದಾದ್ಯಂತ ಗ್ರಾಮೀಣ ಜಲ ಸಂಪನ್ಮೂಲಗಳನ್ನು ಪುನಶ್ಚೇತನ ಗೊಳಿಸುವ ಉಪಕ್ರಮವಾಗಿದ್ದು ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಈ ಯೋಜನೆಯು ಕೆರೆಗಳ ಊಳೆತ್ತುವುದು, ಕೆರೆ ಏರಿ ಬಲಪಡಿಸುವುದು, ಮತ್ತು ನೀರಿನ ಸಂಗ್ರಹಣ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಸಾವಿರಾರು ರೈತರಿಗೆ ಇದರಿಂದಾಗಿ ನೀರಾವರಿ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು, ಬಳಿಕ ತಾಲೂಕಿನ ಯೋಜನಾಧಿಕಾರಿಗಳಾದ ಶೇಖರ್ ಶೆಟ್ಟಿ ಮಾತನಾಡಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿನ ಕೆರೆಗಳನ್ನು ಪುನರ್ಜೀವನಗೊಳಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಮತ್ತು ಕೃಷಿ ಚಟುವಟಿಕೆಗಳಿಗೆ ನೀರು ಪೂರೈಕೆ ಆಗಲಿದ್ದು ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಹೇಳುತ್ತಾ ಪರಿಸರದ ಮಹತ್ವ ಕುರಿತು ಅನೇಕ ವಿಷಯಗಳನ್ನು ತಿಳಿಸಿಕೊಟ್ಟರು,
ಸಭೆಯಲ್ಲಿ ತಾಲೂಕಿನ ಕೃಷಿ ಮೇಲ್ವಿಚಾರಕರಾದ ಶ್ರೀ ಬಾಬು, ವಲಯದ ಮೇಲ್ವಿಚಾರಕರಾದ ಶ್ರೀಕಾಂತ್ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ರಂಜಿತಾ, ಕೆರೆ ಅಧ್ಯಕ್ಷರಾದ ಸತೀಶ್ ಮತ್ತು ಸಮಿತಿಯ ಸದಸ್ಯರು ಹಾಗೂ ಸ್ವಸಹಾಯ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.