Janataa24 NEWS DESK
Turuvekere: ಕೆ.ಆರ್.ಎಸ್. ಪಕ್ಷದ ವತಿಯಿಂದ ಧಿಕ್ಕಾರದ ಬದಲು ಜೈಕಾರ ಕೂಗಿ ವಿನೂತನ ಶೈಲಿಯಲ್ಲಿ ಪ್ರತಿಭಟನೆ.

ತುರುವೇಕೆರೆ: ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ತಾಲೂಕು ಈ.ಒ. ವಿರುದ್ಧ ಪಟ್ಟಣದ ಪ್ರವಾಸಿ ಮಂದಿರದಿಂದ ಕಾಲ್ನಡಿಗೆ ಜಾಥ ನಡೆಸಿ ತಾಲೂಕು ಈ ಓ ವಿರುದ್ಧ ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡು ಜೊತೆಗೆ ಕೆಆರ್ಎಸ್ ಪಾರ್ಟಿಯ ಪದಾಧಿಕಾರಿ ಮೇಲೆ ಗೂಂಡಾ ವರ್ತನೆ ಮಾಡಿಸಿದ್ದಾರೆ ಹಾಗಾಗಿ ಅವರಿಗೆ ಧಿಕ್ಕಾರದ ಬದಲು ಜೈಕಾರವಿರಲಿ ಎಂಬ ವಿನೂತನ ಘೋಷಣೆ ಕೂಗುತ್ತಾ ತಾಲೂಕು ಪಂಚಾಯಿತಿ ಆವರಣಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಎಸ್ ಮಾತನಾಡಿ ಇ.ಒ. ಶಿವರಾಜಯ್ಯ ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡಿರುವ ವಿರುದ್ಧ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಕುರಿತಾಗಿ ಗಂಭೀರವಾಗಿ ಆರೋಪಿಸಿದ ಅವರು ಸಂಬಂಧಪಟ್ಟ ಅಧಿಕಾರಿಗಳು ಇ.ಒ. ಅವರನ್ನು ಕರ್ತವ್ಯದಿಂದ ವಜಾ ಗೊಳಿಸುವಂತೆ ಆಗ್ರಹಿಸಿದರು ನಂತರ ಈ ಓ ಕಚೇರಿ ಒಳಗೆ ಪ್ರವೇಶಿಸಿ ಈ ಓ ಶಿವರಾಜಯ್ಯ ಕೂರುವ ಖಾಲಿ ಕುರ್ಚಿಗೆ ಶಾಲು ಹೊದಿಸಿ ಪೇಟ ತೊಡಿಸಿ ಹಾರ ಹಾಕುವುದರ ಮೂಲಕ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಎಲ್ ಜೀವನ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ. ರಘುನಂದನ ರಾಜ್ಯ ಸಂಘಟನಾ ಕಾರ್ಯದರ್ಶಿ. ಶ್ರೀನಿವಾಸ ಮೂರ್ತಿ ಜಿಲ್ಲಾಧ್ಯಕ್ಷರು. ಚೆನ್ನಯ್ಯ ಎಸ್ಸಿ/ಎಸ್ಟಿ ರಾಜ್ಯ ಕಾರ್ಯದರ್ಶಿ. ತಿಮ್ಮಪ್ಪ ಪದಾಧಿಕಾರಿ ಸೇರಿದಂತೆ ಕೆ.ಆರ್.ಎಸ್ ಪಕ್ಷದ ಮಹಿಳಾ ಪದಾಧಿಕಾರಿಗಳು, ಹಲವು ಭಾಗದ ಕಾರ್ಯಕರ್ತರು, ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್ ಕೆ ಎ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.