JANATAA24 NEWS DESK
Turuvekere: ದರೋಡೆ ಮಾಡಿ ಬಾಲಕ ಪರಾರಿ, ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಅಭಿರಕ್ಷೆ.
ತುರುವೇಕೆರೆ: ತಾಲೂಕಿನಲ್ಲಿ ಕಳೆದ ಒಂದು ವಾರಗಳ ಹಿಂದೆ ಅಷ್ಟೇ, ಬಾಲಕನೊಬ್ಬ ತೋಟದಲ್ಲಿ ಎಮ್ಮೆ ಮೇಯಿಸುತ್ತಿದ್ದ ಸರ್ವ ಮಂಗಳ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಿ ಆಕೆಯ ಕೈಯಲ್ಲಿದ್ದ 20 ಗ್ರಾಂ ತೂಕದ ಚಿನ್ನದ ಬಳೆ, ಕೊರಳಲ್ಲಿದ್ದ 30 ಗ್ರಾಂ ತೂಕದ ಮಾಂಗಲ್ಯ ಸರ, ಕಿವಿಯಲ್ಲಿದ್ದ ನಾಲ್ಕು ಗ್ರಾಂ ತೂಕದ ಓಲೆ, ಒಟ್ಟಾರೆ 54 ಗ್ರಾಂq ತೂಕದ ಚಿನ್ನದ ಒಡವೆಯನ್ನು ಒಟ್ಟಾರೆ ಎರಡು ಲಕ್ಷದ ಎಪ್ಪತ್ತು ಸಾವಿರ ರೂ ಬೆಲೆಬಾಳುವ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದು,
ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯ ಪತ್ತೆಗಾಗಿ ಸಿಪಿಐ ಲೋಹಿತ್ ಅವರು ಒಳಗೊಂಡಂತೆ ತಂಡ ರಚನೆಯಾಗಿ ಪೊಲೀಸ್ ಅಧೀಕ್ಷಕರಾದ ಅಶೋಕ್, ಹೆಚ್ಚುವರಿ ಅಧೀಕ್ಷಕರಾದ ಗೋಪಾಲ್, ಪುರುಷೋತ್ತಮ್ ಮಾರ್ಗದರ್ಶನದಲ್ಲಿ ಕುಣಿಗಲ್ ಉಪ ವಿಭಾಗದ ಪೊಲೀಸ್ ಉಪಾಧಿಕ್ಷಕರಾದ ಓಂ ಪ್ರಕಾಶ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ಗಳಾದ ಮೂರ್ತಿ ಟಿ, ಮೂರ್ತಿ ಕೆ ವಿ, ಎಎಸ್ಐ ಶಂಕ್ರಪ್ಪ, ಸಿಬ್ಬಂದಿಗಳಾದ ಕಾನ್ಸ್ಟೇಬಲ್ ಗಂಗಾಧರ್, ರವಿಕುಮಾರ್, ರಾಜಕುಮಾರ್ ವಗ್ಗೆರೆ, ನಾಗರಾಜು ಕಮ್ಮತ್ತರ, ಈ ತಂಡ ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಅಭಿರಕ್ಷೆ ಮಾಡುವಲ್ಲಿ ಯಶಸ್ವಿಯಾಗಿದ್ದು ಇವರನ್ನು ಪೊಲೀಸ್ ಅಧಿಕ್ಷಕರು ಶ್ಲಾಗಿಸಿದ್ಧರೆ.
ಇನ್ನು ಹಲ್ಲೆಗೊಳಗಾದ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದು ಮಹಿಳೆ ಚೇತರಿಕೆಯನ್ನು ಕಂಡಿದ್ದಾರೆ ಎಂದು ತಿಳಿದು ಬಂದಿದೆ.
ವರದಿ: ಮಂಜುನಾಥ್ ತುರುವೇಕೆರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.